ಸ್ವಾತಂತ್ರ ಇದ್ದರೂ ಬದುಕು ಅತಂತ್ರ...

*#ಸ್ವಾತಂತ್ರ್ಯ_ಬಂದರೂ_ಬದುಕು_ಅತಂತ್ರ...*

Nagendra Banjagere

  *ದಾಸ್ಯಕ್ಕೆ ತೆರಿಗೆಯ ತೇದು ಗ್ಯರಸೆ ಗ್ಯರಸೆ  ದಿನಸೀ ಧಾನ್ಯ ಬೆಳೆದ ಅನ್ನದಾತ ಅಂದು  ತಲೆಯಲ್ಲಿ ಅಕ್ಷರವಿರಲಿಲ್ಲ ಎದೆಯಲ್ಲಿ ಅಕ್ಕರೆಯಿತ್ತು ಸಕಲ ಜೀವಿಗಳಲ್ಲಿ...*

*ಜವಾರಿ ಬೆಳೆದು ತಿಂದುಂಡ ಜನರ ಜೀವ  ಗುಂಡ್ಕಲ್ಲು.. ಗುಡಿಸಲಾದರೂ ಜೋಪಡಿಯಾದರೂ ಚಳಿ ಮಳೆ ಸಿಡಿಲಿಗೆ  ಬೆದರದೆ...*

*ಸ್ವದೇಶಿಗಳೇಕೆ ತೆರಬೇಕು  ಪರದೇಶಿಯರಿಗೆ ತೆರಿಗೆ??ದಂಗೆದ್ದರು  ಒಟ್ಟಾದರು ಇಷ್ಟಾದರೂ ಪರದೇಶಿಗಳ ಸ್ವದೇಶದಿ ಓಡಿಸಿ ತಿರಂಗವ ಹಾರಿಸಿ ಜನಗಣಮನ ಹಾಡಿ..ಅಖಂಡ ದೇಶವು ಮೂರಾಗಿ ಇಬ್ಬಾಗಿಸಿ..*

*ಭಾರತಮಾತೆ ಹೆಣ್ಣು..ಆದಿವಕಾಲದಿಂದಲೂ ಸ್ವಾತಂತ್ರ ಕಸಿದ ಜನ ಸ್ವತಂತ್ರ ಸಿಕ್ಕ ಮೇಲೂ  ಸ್ವಾತಂತ್ರ್ಯ ಕೊಡದೆ ಜನಗಣಮನ ಹೇಳುವ ಜನಮನ...*

*ಅನ್ನದಾತನ ಬೆಳೆಗೆ ಬೆಲೆ ಇಲ್ಲದಾಯ್ತು ಅನ್ನವಿಲ್ಲದಂತಾಯ್ತು... ರಾಜಕಾರಣಿಗಳು ಅನ್ನ ರಾಜನಿಗೆ ಬೀಜದ ಹೆಸರಲ್ಲಿ ಅರೆ ಜೀವ.. ಕೀಟನಾಶಕದಿ ಪೂರ ಜೀವವ ತೆಗೆದು ತರಾವರಿ ತೆರಿಗೆಯ ಬರೆ ಹಾಕಿ ಬೀದಿಗೆ ನೇತಾಕಿದರು ಅವನ...*

*ಶ್ರಮಿಕರ ರಕ್ತ ಬೆವರು ಹೀರಿ ಸಂಪಾದಿಸಿದ ಧನಿಕನ ಮನೆಯ ಮೇಲೆ ತಿರಂಗ ಧರ್ಪದಿ ನಗುತ್ತಿದ್ದರೆ ತಿರುಕನ ಮನೆಯ ತಿರಂಗ ಸ್ವಾತಂತ್ರ್ಯದ ಸಂಕೇತವಾದರೂ ನಿಂದೇನೂ ನಡೆಯದೆಂಬಂತಿತ್ತು...*

Happy Independence day...

✍️ *ನಾಗೇಂದ್ರ ಬಂಜಗೆರೆ.*

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕಾನನ ಸ್ನಾನ...

ಗುಡ್ಡದ ಭೂತ...

ಸಂಗನಕಲ್ಲು ಮತ್ತು ಶಬ್ಧದ ಕಲ್ಲುಗಳು..